ಬ್ರೇಕಿಂಗ್ ನ್ಯೂಸ್
15-05-23 11:03 am Mangalore Correspondent ಕರಾವಳಿ
ಪುತ್ತೂರು, ಮೇ 15 : ಪುತ್ತೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಾಗಿರುವ ಹಿನ್ನೆಲೆಯಲ್ಲಿ ಆಕ್ರೋಶಕ್ಕೀಡಾದ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹಾಗೂ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದಾರೆ.
ಪುತ್ತೂರಿನ ಬಸ್ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತರೇ ಈ ಕೃತ್ಯ ನಡೆಸಿದ್ದು ಪುತ್ತೂರಿನವರೇ ಆದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡರಿಗೆ ಹಿಡಿಶಾಪ ಹಾಕಿದ್ದಾರೆ. ಇಬ್ಬರ ಭಾವಚಿತ್ರದ ಬ್ಯಾನರ್ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಕೋರಿದ್ದು 'ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ' ಅಂತ ಬರೆದಿದ್ದಾರೆ. ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಿದ್ದು ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದು ಕಾರ್ಯಕರ್ತರು ಮತ್ತು ಸಂಘಟನೆಗೆ ತೀವ್ರ ಹಿನ್ನಡೆಯಾಗಿದೆ. ಇದಕ್ಕೆಲ್ಲ ರಾಜ್ಯಾಧ್ಯಕ್ಷ ನಳಿನ್ ಮತ್ತು ಡಿವಿ ಸದಾನಂದ ಗೌಡ ಕಾರಣ ಎನ್ನುವ ನೆಲೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಿಂದು ಕಾರ್ಯಕರ್ತರ ಕಡೆಗಣನೆ ಮಾಡಿದ್ದಕ್ಕಾಗಿ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸಿ ರಾಜ್ಯದ ಗಮನ ಸೆಳೆದಿದ್ದರು. ಕಾಂಗ್ರೆಸ್ ವಿರುದ್ದ ಕೇವಲ ಮೂರು ಸಾವಿರ ಮತಗಳ ಅಂತರದಲ್ಲಿ ಸೆಣಸಾಡಿ ಪುತ್ತಿಲ ಸೋತಿದ್ದರು. ಬಿಜೆಪಿ ಅಭ್ಯರ್ಥಿ ಕಾಂಗ್ರೆಸಿಗೆ ಹೋರಾಟ ನೀಡಲು ಸಾಧ್ಯವಾಗದೆ, 35 ಸಾವಿರ ಮತಗಳೊಂದಿಗೆ ದೂರ ಉಳಿದಿದ್ದರು. ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯ ಸೋಲಿಗೆ ನಳಿನ್ ಕುಮಾರ್ ಮತ್ತು ಡಿವಿಯೇ ಕಾರಣ ಎಂದು ಇಬ್ಬರ ವಿರುದ್ಧವೂ ಕಿಡಿ ಕಾರುತ್ತಿದ್ದಾರೆ.
ನಳಿನ್ ಕುಮಾರ್ ಹಾಗೂ ಡಿವಿಎಸ್ ಪುತ್ತೂರು ತಾಲೂಕಿನವರೇ ಆಗಿದ್ದು ಪಕ್ಷದ ಪ್ರತಿ ನಡೆಗಳ ಮೇಲೆ ಕೈಯಾಡಿಸುತ್ತಿದ್ದರು. ಈ ಬಾರಿ ಚುನಾವಣೆ ಘೋಷಣೆ ಮೊದಲೇ ಉತ್ತಮ ಅಭ್ಯರ್ಥಿಗೆ ಸೀಟು ಕೊಡಬೇಕು, ಹಿಂದು ಸಂಘಟನೆ ಹಿನ್ನೆಲೆ ಇದ್ದವರಿಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು ಆಗ್ರಹ ಮಾಡಿದ್ದರು. ಕೊನೆಗೆ, ಸುಳ್ಯದ ಮಹಿಳೆಗೆ ಟಿಕೆಟ್ ಕೊಟ್ಟಿದ್ದು ಕಾರ್ಯಕರ್ತರನ್ನು ಕೆರಳಿಸಿತ್ತು. ಇದನ್ನೆಲ್ಲ ನಳಿನ್ ಕುಮಾರ್ ಮಾಡಿಸಿದ್ದು ಎಂದು ಕಾರ್ಯಕರ್ತರಲ್ಲಿ ಆಕ್ರೋಶ ಇದೆ.
Garland of footwear banner put on BJP Nalin Kateel and D V Sadananda Gowda in Puttur goes viral after lossing Karnataka elections. It is said BJP karyakartas have put up the banner. Reason for BJP to loose Karnataka elections by two great people is posted in the banner.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm