ಬ್ರೇಕಿಂಗ್ ನ್ಯೂಸ್
29-10-20 08:48 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 29: ಬಿಜೆಪಿ ಮುಖಂಡ ಹಾಗು ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲಿನ ದಾಳಿ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ 3 ಗಂಟೆ ಅವಧಿಯಲ್ಲಿ ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್(22), ಮತ್ತು ಮಹಮ್ಮದ್ ಸೈಪುದ್ದೀನ್(22) ಬಂಧಿತರಾಗಿದ್ದು ಪೊಲೀಸರ ವಿಚಾರಣೆಯಲ್ಲಿ ತಮ್ಮ ಕೃತ್ಯದ ಉದ್ದೇಶವನ್ನು ಬಾಯ್ಬಿಟ್ಟಿದ್ದಾರೆ. ಬಂಟ್ವಾಳ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ಆರೋಪಿ ಸವಾದ್ ಬಂಧನಕ್ಕೆ ಬಲೆ ಬೀಸಿದೆ.
ಬುಧವಾರ (ನಿನ್ನೆ) ಸಂಜೆ ಸುಮಾರು 7:15ರ ಹೊತ್ತಿಗೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ದಿನೇಶ್ ತಮ್ಮ ಪೋಟೊ ಸ್ಟುಡಿಯೋದಲ್ಲಿದ್ದಾಗ ನಾಲ್ವರು ಯುವಕರು ಫೋಟೊ ತೆಗೆಸುವ ನೆಪದಲ್ಲಿ ಬಂದಿದ್ದರು. ಈ ಸಂದರ್ಭ ದಿನೇಶ್ ಅವರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿತ್ತು. ಈ ವೇಳೆ ಅಲ್ಲಿದ್ದ ಶೇಖರ ಪೂಜಾರಿ ಎಂಬವರು ಹಲ್ಲೆ ತಪ್ಪಿಸಲು ಆರೋಪಿಗಳಿಗೆ ಜೋರಾಗಿ ಅಲ್ಲೇ ಇದ್ದ ಚೇರ್ ನಿಂದ ಹೊಡೆದಿದ್ದು ಅವರ ಕೈಗೆ ಗಾಯವಾಗಿತ್ತು. ಬಳಿಕ ಅಕ್ಕಪಕ್ಕದ ವ್ಯಾಪಾರಸ್ಥರು ಸೇರಿದಾಗ ಆರೋಪಿಗಳು ಪರಾರಿಯಾಗಿದ್ದರು.
ಕೊಲ್ಲಲು ಬಂದಿದ್ದ ದುಷ್ಕರ್ಮಿಗಳು !
ಇತ್ತೀಚೆಗೆ ಪರಂಗಿಪೇಟೆ ಬಳಿಯ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ದಿನೇಶ್, ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದೇ ಈ ದಾಳಿಗೆ ಕಾರಣ ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ನಮ್ಮ ವಿಷಯಕ್ಕೆ ನೀನ್ಯಾಕೆ ಬಂದಿದ್ದೀಯಾ.. ಅಂತ ಪ್ರಶ್ನಿಸಿ ಫೋಟೊ ತೆಗೆಸುವ ನೆಪದಲ್ಲಿ ಬಂದಿದ್ದ ಯುವಕರು ತಲವಾರು ದಾಳಿ ನಡೆಸಿದ್ದಾರೆ.
ಘಟನೆಯ ದ್ವೇಷದಿಂದ ದಿನೇಶ್ ಅವರನ್ನು ಕೊಲ್ಲುವ ಉದ್ದೇಶದಿಂದ ತಲವಾರು ದಾಳಿ ನಡೆಸಲಾಗಿತ್ತು. ತಲವಾರು ದಾಳಿಯಿಂದಾಗಿ ದಿನೇಶ್ ಅವರ ತಲೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ತೀವ್ರ ಗಾಯವಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಿನೇಶ್ ಬಿಜೆಪಿ ಪರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನಾಗಿದ್ದು ಪುದು ಮಹಾಶಕ್ತಿ ಕೇಂದ್ರದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿದ್ದಾರೆ.
An attempt to kill photographer Dinesh, owner of Trisha Studio at Farangipet, was made by a gang of four youngsters. Three of them have been held by the police.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm