ಬ್ರೇಕಿಂಗ್ ನ್ಯೂಸ್
16-05-23 06:43 pm Mangalore Correspondent ಕರಾವಳಿ
ಪುತ್ತೂರು, ಮೇ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಏಳು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಏಳು ಮಂದಿಯ ಪೈಕಿ ನಾಲ್ವರು ಕಟ್ಟರ್ ಬಿಜೆಪಿ ಕಾರ್ಯಕರ್ತರೇ ಆಗಿದ್ದು ಮೊನ್ನೆ ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಮೂವರು ಕಾರ್ಯಕರ್ತರು ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಚುನಾವಣೆ ಫಲಿತಾಂಶದಲ್ಲಿ ಅರುಣ್ ಪುತ್ತಿಲ ಗೆಲುವಿನ ಹತ್ತಿರ ಹೋಗಿದ್ದ ಬಳಿಕ ಪುತ್ತೂರಿನ ಬಿಜೆಪಿ ಕಾರ್ಯಕರ್ತರೆಲ್ಲ ಪುತ್ತಿಲ ಪರ ನಿಂತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಹೀನಾಯ ಸೋಲಿಗೆ ಇವರಿಬ್ಬರೇ ಕಾರಣ ಎಂದು ಸಿಟ್ಟಿನಲ್ಲಿ ಕಾರ್ಯಕರ್ತರೇ ಸೇರಿಕೊಂಡು ಭಾನುವಾರ ರಾತ್ರಿ ಬ್ಯಾನರ್ ಹಾಕಿದ್ದರು.
ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ, ಬೆಂಡೆತ್ತಬೇಕು ಎಂದು ಸ್ಥಳೀಯ ನಳಿನ್ ಪರ ಇರುವ ಬಿಜೆಪಿ ಪುಢಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದರು. ಪ್ರಮುಖ ಒಬ್ಬ ಆರೋಪಿಯನ್ನು ಬಿಟ್ಟು ಏಳು ಮಂದಿಯನ್ನು ಬಂಧಿಸಿದ ಪೊಲೀಸರು ಠಾಣೆಯಲ್ಲಿ ಕೂಡಿಹಾಕಿ, ಬೆತ್ತ ಪುಡಿ ಮಾಡಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಅರುಣ್ ಪುತ್ತಿಲ ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಠಾಣೆಗೆ ತೆರಳಿ ಏಳು ಮಂದಿಯನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳನ್ನು ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿಕೊಟ್ಟಿದ್ದಾರೆ. ಈ ಘಟನೆ ಪುತ್ತೂರಿನಲ್ಲಿ ಸಂಘಟನೆಯೊಳಗೆ ಮತ್ತಷ್ಟು ಬಿರುಕು ಮೂಡಲು ಕಾರಣವಾಗಿದೆ.
Puttur Poster Sadananda Gowda, BJP Nalin kateel garlanded with footwear, 7 arrested, Arun Puthila gets them released from Police station. The writing on the banner says, “Heartfelt obituary to both of you
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 05:35 pm
Richard, Mangaluru Correspondent
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm