ಬ್ರೇಕಿಂಗ್ ನ್ಯೂಸ್
16-05-23 06:43 pm Mangalore Correspondent ಕರಾವಳಿ
ಪುತ್ತೂರು, ಮೇ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಏಳು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಏಳು ಮಂದಿಯ ಪೈಕಿ ನಾಲ್ವರು ಕಟ್ಟರ್ ಬಿಜೆಪಿ ಕಾರ್ಯಕರ್ತರೇ ಆಗಿದ್ದು ಮೊನ್ನೆ ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಮೂವರು ಕಾರ್ಯಕರ್ತರು ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಚುನಾವಣೆ ಫಲಿತಾಂಶದಲ್ಲಿ ಅರುಣ್ ಪುತ್ತಿಲ ಗೆಲುವಿನ ಹತ್ತಿರ ಹೋಗಿದ್ದ ಬಳಿಕ ಪುತ್ತೂರಿನ ಬಿಜೆಪಿ ಕಾರ್ಯಕರ್ತರೆಲ್ಲ ಪುತ್ತಿಲ ಪರ ನಿಂತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಹೀನಾಯ ಸೋಲಿಗೆ ಇವರಿಬ್ಬರೇ ಕಾರಣ ಎಂದು ಸಿಟ್ಟಿನಲ್ಲಿ ಕಾರ್ಯಕರ್ತರೇ ಸೇರಿಕೊಂಡು ಭಾನುವಾರ ರಾತ್ರಿ ಬ್ಯಾನರ್ ಹಾಕಿದ್ದರು.
ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ, ಬೆಂಡೆತ್ತಬೇಕು ಎಂದು ಸ್ಥಳೀಯ ನಳಿನ್ ಪರ ಇರುವ ಬಿಜೆಪಿ ಪುಢಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದರು. ಪ್ರಮುಖ ಒಬ್ಬ ಆರೋಪಿಯನ್ನು ಬಿಟ್ಟು ಏಳು ಮಂದಿಯನ್ನು ಬಂಧಿಸಿದ ಪೊಲೀಸರು ಠಾಣೆಯಲ್ಲಿ ಕೂಡಿಹಾಕಿ, ಬೆತ್ತ ಪುಡಿ ಮಾಡಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಅರುಣ್ ಪುತ್ತಿಲ ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಠಾಣೆಗೆ ತೆರಳಿ ಏಳು ಮಂದಿಯನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳನ್ನು ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿಕೊಟ್ಟಿದ್ದಾರೆ. ಈ ಘಟನೆ ಪುತ್ತೂರಿನಲ್ಲಿ ಸಂಘಟನೆಯೊಳಗೆ ಮತ್ತಷ್ಟು ಬಿರುಕು ಮೂಡಲು ಕಾರಣವಾಗಿದೆ.
Puttur Poster Sadananda Gowda, BJP Nalin kateel garlanded with footwear, 7 arrested, Arun Puthila gets them released from Police station. The writing on the banner says, “Heartfelt obituary to both of you
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm