ಬ್ರೇಕಿಂಗ್ ನ್ಯೂಸ್
18-05-23 01:00 pm Mangalore Correspondent ಕರಾವಳಿ
ಉಳ್ಳಾಲ, ಮೇ 18: ಕೆಲವರು ದಿಢೀರ್ ಶ್ರೀಮಂತರಾಗಲು ಬಯಸಿ ಲಾಟರಿ ಟಿಕೆಟ್ ತೆಗೆದು ಬಂಪರ್ ಬಂದಿದೆಯಾ ಎಂದು ಜಾತಕಪಕ್ಷಿಯಂತೆ ಕಾಯುತ್ತ ಇರೋರಿದ್ದಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದರೂ, ವಿಜೇತ ಅದೃಷ್ಟವಂತ ಈವರೆಗೂ ಲಾಟರಿ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಹೀಗಾಗಿ ಏಜೆನ್ಸಿಯವರೇ ಬಂಪರ್ ಗೆದ್ದ ವಿಜೇತನಿಗಾಗಿ ಕಾದು ಕುಳಿತುಕೊಳ್ಳುವ ಸ್ಥಿತಿ ಎದುರಾಗಿದೆ.
ತಲಪಾಡಿಯ ಅಮಲ್ ಕನಕದಾಸ ಅವರಿಗೆ ಸೇರಿದ ತಲಪಾಡಿಯ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮಾರಾಟವಾದ ಟಿಕೆಟಿಗೆ ಕೇರಳ ರಾಜ್ಯದ ಅಕ್ಷಯ ಲಾಟರಿಯ ಬಂಪರ್ ಬಹುಮಾನ ಬಂದಿದೆ, ಕೇರಳ ಗಡಿಭಾಗ ಕರ್ನಾಟಕದ ಮಂಗಳೂರು, ಮಂಜೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಯಲ್ಲಿ ಮಾರಾಟವಾದ ಮೇ 7ರ ಅಕ್ಷಯಾ ಲಾಟರಿ ಎ.ಟಿ. 317545 ಟಿಕೆಟಿಗೆ ಎಪ್ಪತ್ತು ಲಕ್ಷ ಬಂಪರ್ ಬಹುಮಾನ ಬಂದಿದ್ದು, ಈ ಟಿಕೆಟ್ ಪಡೆದುಕೊಂಡ ಅದೃಷ್ಟ ಶಾಲಿಗೆ ಹುಡುಕಾಟ ನಡೆಯುತ್ತಿದೆ.

ಕನಕದಾಸ ಅವರ ಏಜೆನ್ಸಿಗೆ ಕೆಲ ತಿಂಗಳ ಹಿಂದೆ ಕೆ.ಸಿ. ರೋಡ್ನ ವ್ಯಕ್ತಿಯೊಬ್ಬರಿಗೆ 75 ಲಕ್ಷ ರೂ. ಮತ್ತು ಕೋಟೆಕಾರು ಒಲವಿನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೆಕ್ಯುರಿಟಿ ಗಾರ್ಡ್ ಗೆ ಒಂದು ಕೋಟಿ ರೂ. ಬಹುಮಾನ ಬಂದಿದ್ದು, ಒಟ್ಟು ನಾಲ್ಕು ಬಾರಿ ಬಂಪರ್ ಬಹುಮಾನ ಬಂದಿತ್ತು. ಇದೀಗ ಅದೃಷ್ಟಶಾಲಿಯ ಹುಡುಕಾಟ ನಡೆಯುತ್ತಿದ್ದು, ಕರ್ನಾಟಕ - ಕೇರಳ ಗಡಿಭಾಗದವರೇ ಈ ವಿಜೇತರು ಇರಬಹುದು ಎಂದು ಅಮಲ್ ಕನಕದಾಸ್ ತಿಳಿಸಿದ್ದಾರೆ.
Mangalore Kerala lottery Man wins 70 lakhs lottery, doesn't Appear to collect money, Talapady Jayamma lottery frim requests to collect money.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm