ಬ್ರೇಕಿಂಗ್ ನ್ಯೂಸ್
18-05-23 01:35 pm Mangalore Correspondent ಕರಾವಳಿ
ಪುತ್ತೂರು, ಮೇ 18: ಪೊಲೀಸ್ ದೌರ್ಜನ್ಯ ಘಟನೆ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಗ್ರಾಮಾಂತರ ಠಾಣೆ ಎಸ್ಐ ಶ್ರೀನಾಥ ರೆಡ್ಡಿ ಮತ್ತು ಸಿಬಂದಿ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಹಲ್ಲೆಗೀಡಾದ ಅವಿನಾಶ್ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಡಿವೈಎಸ್ಪಿ ವೀರಯ್ಯ ಹಿರೇಮಠ, ಗ್ರಾಮಾಂತರ ಠಾಣೆ ಎಸ್ಐ ಶ್ರೀನಾಥ ರೆಡ್ಡಿ ಮತ್ತು ಸಿಬಂದಿ ಹರ್ಷಿತ್ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಘಟನೆ ಬಗ್ಗೆ ಡಿಎಸ್ಪಿ ಧರ್ಮಪ್ಪ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಎಸ್ಪಿ ವಿಕ್ರಮ್ ಅಮಟೆ ಅವರಿಗೆ ವರದಿ ನೀಡಿದ್ದಾರೆ. ಇದರಂತೆ, ಇಬ್ಬರನ್ನು ತಕ್ಷಣದಿಂದಲೇ ಎಸ್ಪಿ ವಿಕ್ರಂ ಅಮಟೆ ಅಮಾನತುಗೊಳಿಸಿದ್ದು, ಡಿವೈಎಸ್ಪಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಪೊಲೀಸ್ ದೌರ್ಜನ್ಯ ಘಟನೆ ಸಂಬಂಧಿಸಿ ತನಿಖೆ ನಡೆಸಲು ಬಂಟ್ವಾಳ ಡಿಎಸ್ಪಿ ಧರ್ಮಪ್ಪ ಅವರಿಗೆ ವಹಿಸಲಾಗಿತ್ತು. ಇಲಾಖಾ ತನಿಖೆಯನ್ನು ಧರ್ಮಪ್ಪ ನಡೆಸುತ್ತಿದ್ದು, ಇದರ ನಡುವಲ್ಲೇ ಪ್ರಾಥಮಿಕ ವರದಿಯನ್ನು ಎಸ್ಪಿಗೆ ಸಲ್ಲಿಕೆ ಮಾಡಲಾಗಿದೆ. ಎಸ್ಪಿ ವಿಕ್ರಂ ಅಮಟೆ ಪುತ್ತೂರಿನಲ್ಲೇ ಬೀಡು ಬಿಟ್ಟಿದ್ದು, ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವುದರಿಂದ ತುರ್ತಾಗಿ ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ದೌರ್ಜನ್ಯ ಹಿನ್ನೆಲೆಯಲ್ಲಿ ಅವಿನಾಶ್ ಮತ್ತು ಗುರುಪ್ರಸಾದ್ ಎಂಬವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಮೋದಿ ಬ್ರಿಗೇಡ್ ನಾಯಕ ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಮಾನಸಿಕ ಧೈರ್ಯ ತುಂಬಿದ್ದಾರೆ.
Puttur Police Atrocity over Bjp Banner row, Sampya Police Sub Inspector Srinath Reddy, Constable suspended, Action against DYSP demanded. The puttur police had arrested seven Hindu Karyakartas and brutally assaulted them in the police station for posting banner with footwear on Nalin Kateel and Sadananada Gowda
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm