ಬ್ರೇಕಿಂಗ್ ನ್ಯೂಸ್
19-05-23 12:21 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹೊಡೆಸಿದ್ದಕ್ಕೆ ನಳಿನ್ ಕುಮಾರ್ ಮತ್ತು ಕಲ್ಲಡ್ಕ ಭಟ್ಟರು ಕಾರಣ. ಲೋಕಸಭೆ ಸದಸ್ಯನಾಗಿ ಕಾರ್ಯಕರ್ತರನ್ನು ಪೊಲೀಸರಿಗೆ ಹೇಳಿ ಹೊಡೆಸಿದ್ದಾರಂದ್ರೆ ಏನರ್ಥ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಿನ್ನೆ ಕಲ್ಲಡ್ಕ ಭಟ್ಟರು ಕಾರ್ಯಕರ್ತರಿಗೆ ಹೊಡೆಸಿದ್ದು ಕಾಂಗ್ರೆಸ್ ಸರ್ಕಾರ ಕಾರಣ ಎಂದಿದ್ದಾರೆ. ನಮ್ಮ ಮುಖ್ಯಮಂತ್ರಿ ಇನ್ನಷ್ಟೇ ಪ್ರಮಾಣ ವಚನ ಸ್ವೀಕರಿಸಬೇಕು. ಕಾಂಗ್ರೆಸ್ ಸರಕಾರ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ. ಈಗ ಉಸ್ತುವಾರಿ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರೇ ಇದ್ದಾರೆ. ಆದರೆ ಭಟ್ಟರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ್ದಾರೆ. ಸಂಸದ ನಳಿನ್ ಕುಮಾರ್ ಮತ್ತು ಕಲ್ಲಡ್ಕ ಭಟ್ಟರು ಇನ್ಫ್ಲುಯೆನ್ಸ್ ಮಾಡಿ ಪೊಲೀಸರ ಮೂಲಕ ಹೊಡೆಸಿದ್ದಾರೆ. ಇದಕ್ಕೆ ಯಾರು ಜವಾಬ್ದಾರಿ. ಸಾಯುವ ಹಾಗೆ ಹೊಡೆಸಿದ್ದಾರಂದ್ರೆ ಇವರಿಗೆ ಮಾನವೀಯತೆ ಇದೆಯೇ ಎಂದು ಅಭಯಚಂದ್ರ ಜೈನ್ ಪ್ರಶ್ನೆ ಮಾಡಿದ್ದಾರೆ.

ಎರಡು ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತ ಪ್ರಶ್ನೆಗೆ, ಪಕ್ಷದಲ್ಲಿ ಬಲಿಷ್ಠ ನಾಯಕತ್ವದ ಕೊರತೆ ಇದೆ. ಜೊತೆಗೆ, ಬಿಜೆಪಿಯವರು ದೇವರ ಹೆಸರಿನಲ್ಲಿ ರಾಜಕೀಯ ಮಾಡಿದ್ದಾರೆ. ಜನ ತಾತ್ಕಾಲಿಕ ಮರುಳಾಗಿರಬಹುದು. ಹಿಂದೆ 1985ರಲ್ಲಿ ಬಿಜೆಪಿಗೆ ಎರಡೇ ಸ್ಥಾನ ಇದ್ದಿದ್ದು. ಅಂತಹದ್ದೇ ಸ್ಥಿತಿಗೆ ಬಿಜೆಪಿ ಹೋಗಲಿದೆ. ಕೋಮು ಭಾವನೆಯನ್ನು ಕೆರಳಿಸುವುದರಲ್ಲಿ ಬಿಜೆಪಿ ಯಶಸ್ವಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಜನ ಮತ ನೀಡಿದ್ದಾರೆ. ಒಳ್ಳೆಯ ಸರ್ಕಾರ ಬರಲಿದೆ, ಒಳ್ಳೆಯ ಆಡಳಿತ ನೀಡಲಿದ್ದಾರೆಂಬ ವಿಶ್ವಾಸ ಇದೆ. ಬಿಜೆಪಿಯವರು ಅಧಿಕಾರ ಸಿಕ್ಕಾಗ ಕಾಂಗ್ರೆಸ್ ಮುಕ್ತ ಎಂದು ಹೇಳಿಕೆ ನೀಡಿದ್ದರು. ಈಗ ಜನ ಯಾರು ಮುಕ್ತ ಆಗಬೇಕೆಂದು ತೋರಿಸಿದ್ದಾರೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಕೆ ಹರಿಪ್ರಸಾದ್ ಅವರನ್ನು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮಾಡಬೇಕು. ಗೃಹ ಸಚಿವ ಸ್ಥಾನ ಕೊಟ್ಟರೆ ದಿಟ್ಟವಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಛಲದಂಕ ಮಲ್ಲ, ಪ್ರಬಲ ವ್ಯಕ್ತಿಯನ್ನು ಸಚಿವ ಸ್ಥಾನಕ್ಕೇರಿಸಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ಗಡುಸಾದ ವ್ಯಕ್ತಿ ಆಡಳಿತಕ್ಕೆ ಬರಬೇಕು. ಇಂದಿರಾ ಗಾಂಧಿ, ರಾಜೀವ ಗಾಂಧಿ ಒಡನಾಟ ಇದ್ದವರು ಹರಿಪ್ರಸಾದ್. ದಿಟ್ಟ ವ್ಯಕ್ತಿತ್ವದವರು, ಆಡಳಿತದಲ್ಲಿ ಅನುಭವ ಇದ್ದವರು ಉಸ್ತುವಾರಿ ಸಚಿವ ಸ್ಥಾನಕ್ಕೇರಿದರೆ ಸಾಮರಸ್ಯ ಸಾಧ್ಯ ಎಂದು ಅಭಯಚಂದ್ರ ಜೈನ್ ಹೇಳಿದರು.

ಹಿಂದೆ ಜನಾರ್ದನ ಪೂಜಾರಿ, ಆಸ್ಕರ್, ಮೊಯ್ಲಿಯಂಥವರು ಎಂಆರ್ ಪಿಎಲ್ ತಂದು ಸಾವಿರಾರು ಜನರಿಗೆ ಉದ್ಯೋಗ ಕೊಟ್ಟಿದ್ದಾರೆ. ಈಗ ಉತ್ತರ ಭಾರತೀಯರಿಗೆ ಉದ್ಯೋಗ ಹೋಗುವ ಸ್ಥಿತಿಯಿದೆ. ಇದನ್ನು ಪ್ರಶ್ನೆ ಮಾಡಬೇಕಿದ್ದರೆ ಸಮರ್ಥ ನಾಯಕ ಸಚಿವ ಸ್ಥಾನಕ್ಕೇರಬೇಕು. ಏರ್ಪೋರ್ಟ್ ಅಂತಾರಾಷ್ಟ್ರೀಯ ಮಟ್ಟಕ್ಕೇರಿದಾಗ, ವಿಸ್ತರಣೆಗೆ ಭೂಸ್ವಾಧೀನ ಮಾಡಿಕೊಟ್ಟಿದ್ದು ರಮಾನಾಥ ರೈಗಳು. ಎಸ್ಸಿ- ಎಸ್ಟಿ ಜನರನ್ನು ಮನವೊಲಿಸಿ ರಾತ್ರಿ ಹಗಲು ರಮಾನಾಥ ರೈ ಕೆಲಸ ಮಾಡಿದ್ದಾರೆ. ಬಿಜೆಪಿಯವರು ಈ ಜಿಲ್ಲೆಯ ಅಭಿವೃದ್ಧಿಗೆ ಏನಾದರೂ ಕೊಡುಗೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.
Bjp banner issue, police Autrocity on Hindu Karyakartas, Nalin Kateel has ordered police for third degree torture, slams Abhayachandra Jain in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am