ಬ್ರೇಕಿಂಗ್ ನ್ಯೂಸ್
29-10-20 01:53 pm Mangaluru Correspondant ಕರಾವಳಿ
ಪುತ್ತೂರು, ಅಕ್ಟೋಬರ್ 29: ಖಾಸಗಿ ಆಸ್ಪತ್ರೆಯಲ್ಲಿ ರೆಸೆಪ್ಷನಿಸ್ಟ್ ಆಗಿದ್ದ ಯುವತಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಬಾಲಕೃಷ್ಣ ಗೌಡ ಎಂಬವರ ಪುತ್ರಿ ಮಧುಶ್ರೀ(26) ಕೆರೆಗೆ ಹಾರಿ ಸಾವಿಗೆ ಶರಣಾದ ಯುವತಿ.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು , ವಿವಾಹಿತನಾಗಿರುವ ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೈರಿಯಲ್ಲಿ ಬರೆದುಕೊಂಡಿದ್ದಾಳೆ. ಈ ಬಗ್ಗೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ನಾಲ್ಕು ವರ್ಷದಿಂದ ಪುತ್ತೂರಿನ ಖಾಸಗಿ ಅಸ್ಪತ್ರೆ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಧುಶ್ರೀ ರಾತ್ರಿ ಆಸ್ಪತ್ರೆಯ ಹಾಸ್ಟೆಲ್ ನಲ್ಲಿ ತಂಗುತ್ತಿದ್ದರು. ರಜಾ ದಿನಗಳಲ್ಲಿ ಹೆಚ್ಚಾಗಿ ಅಜ್ಜಿ ಮನೆಗೆ ಬರುತ್ತಿದ್ದರು. ನಿನ್ನೆ ಮಧ್ಯಾಹ್ನ ಸಂಪ್ಯದ ಕೊಲ್ಯದಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಆಕೆ ಊಟದ ಬಳಿಕ ತೋಟಕ್ಕೆ ಹೋಗಿ, ಕೆರೆಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ
ತನ್ನ ಸಾವಿಗೆ ದೇವಿಕಿರಣ್ ಎಂಬಾತ ನೀಡುತ್ತಿದ್ದ ಕಿರುಕುಳ ಕಾರಣ ಎಂದು ಮಧುಶ್ರೀ ತನ್ನ ಡೈರಿಯಲ್ಲಿ ಬರೆದಿದ್ದಾರೆ. ಸಂಪಾಜೆಯ ದೇವಿಕಿರಣ್ ಮತ್ತು ನಾನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಆದರೆ ಕಳೆದ ಜೂನ್ ನಲ್ಲಿ ಆತನಿಗೆ ಬೇರೆ ಯುವತಿಯೊಂದಿಗೆ ವಿವಾಹವಾಗಿತ್ತು. ಹೀಗಿದ್ದರೂ ಆತ ನನ್ನ ಜೊತೆ ಸಂಪರ್ಕದಲ್ಲಿದ್ದ. ನನಗೆ ಬೇರೆಯವರನ್ನು ಮದುವೆಯಾಗದ್ದಂತೆ ಒತ್ತಾಯ ಮಾಡುತ್ತಿದ್ದ. ಮದುವೆಗೆ ಪ್ರಯತ್ನಿಸಿದರೆ ಸಂಬಂಧ ಇದೆ ಎಂದು ಯುವಕನಿಗೆ ತಿಳಿಸಿ ಮದುವೆ ತಪ್ಪಿಸುವುದಾಗಿ ಬೆದರಿಸಿದ್ದಾನೆ. ಅಲ್ಲದೇ ಬೇರೆ ಮದುವೆಯಾದರೆ ಕೊಲೆ ಮಾಡುವ ಬೆದರಿಕೆ ಹಾಕುತ್ತಿದ್ದ ಎಂದು ಆಕೆ ಡೈರಿಯಲ್ಲಿ ಬರೆದುಕೊಂಡಿದ್ದಾರೆ.
ಮಧುಶ್ರೀ ಆತ್ಮಹತ್ಯೆಗೆ ದೇವಿಚರಣ್ ಕಿರುಕುಳವೇ ಕಾರಣ ಎಂದು ಮಧುಶ್ರೀಯವರ ಮಾವ ವಿಠಲ್ ಗೌಡ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
In a shocking incident a woman has committed suicide by jumping to lake in puttur after continuous threats and harrsment by Ex- Boyfriend. Sampya police have registered the case.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm