ಬ್ರೇಕಿಂಗ್ ನ್ಯೂಸ್
21-05-23 10:12 am Mangalore Correspondent ಕರಾವಳಿ
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ , ಕುಂಜತ್ತೂರು ನಿವಾಸಿ ಬಿ.ಫಾತಿಮಾ(85) ಮೃತಪಟ್ಟ ವೃದ್ಧೆ. ಫಾತಿಮಾ ಅವರು ತನ್ನ ಮಗ ಮೂಸ(50), ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಸಂಜೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ ಶವಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಫಾತಿಮಾ ಓಮ್ನಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದು ಮೊಮ್ಮಗ ಮುಸ್ತಫಾ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ನಿದ್ದೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.



ಘಟನೆಯನ್ನ ಕಂಡ ವಾಹನ ಸವಾರರೊಬ್ಬರು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಲ್ಲಿ ವಿಚಾರ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಸಿಬ್ಬಂದಿಗಳಾದ ಮಹೇಶ್ ಆಚಾರ್ಯ ಮತ್ತು ವಿಠ್ಠಲ್ ದಾಸ್ ಅವರು ಕಬ್ಬಿಣದ ಸಲಾಕೆಯೆಡೆಯಲ್ಲಿ ಸಿಲುಕಿ ಛಿಧ್ರಗೊಂಡಿದ್ದ ಫಾತಿಮಾರನ್ನ ಹೊರಗೆಳೆದು ರಕ್ತದ ಮಡುವಲ್ಲಿದ್ದ ಮೂವರನ್ನ ತಮ್ಮ ಇಲಾಖಾ ವಾಹನದಲ್ಲಿ ತುಂಬಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ದೇಹ ಛಿದ್ರಗೊಂಡು ಗಂಭೀರ ಗಾಯಗೊಂಡಿದ್ದ ಫಾತಿಮಾ ಅವರು ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ದೇಹದ ಮಾಂಸ ಖಂಡಗಳು ಕಾರಿನಲ್ಲೇ ಉಳಿದಿವೆ. ಕಾರು ಚಲಾಯಿಸುತ್ತಿದ್ದ ಮುಸ್ತಾಫನ ಕಾಲು ಮುರಿದಿದೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni car accident at Uchila in Mangalore, 85 year old killed, three hospitalised. The three were shifited by Traffic police constable in the early morning.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm