ಬ್ರೇಕಿಂಗ್ ನ್ಯೂಸ್
21-05-23 10:12 am Mangalore Correspondent ಕರಾವಳಿ
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ , ಕುಂಜತ್ತೂರು ನಿವಾಸಿ ಬಿ.ಫಾತಿಮಾ(85) ಮೃತಪಟ್ಟ ವೃದ್ಧೆ. ಫಾತಿಮಾ ಅವರು ತನ್ನ ಮಗ ಮೂಸ(50), ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಸಂಜೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ ಶವಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಫಾತಿಮಾ ಓಮ್ನಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದು ಮೊಮ್ಮಗ ಮುಸ್ತಫಾ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ನಿದ್ದೆ ಮಂಪರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತಡೆಬೇಲಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.



ಘಟನೆಯನ್ನ ಕಂಡ ವಾಹನ ಸವಾರರೊಬ್ಬರು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸರಲ್ಲಿ ವಿಚಾರ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಸಿಬ್ಬಂದಿಗಳಾದ ಮಹೇಶ್ ಆಚಾರ್ಯ ಮತ್ತು ವಿಠ್ಠಲ್ ದಾಸ್ ಅವರು ಕಬ್ಬಿಣದ ಸಲಾಕೆಯೆಡೆಯಲ್ಲಿ ಸಿಲುಕಿ ಛಿಧ್ರಗೊಂಡಿದ್ದ ಫಾತಿಮಾರನ್ನ ಹೊರಗೆಳೆದು ರಕ್ತದ ಮಡುವಲ್ಲಿದ್ದ ಮೂವರನ್ನ ತಮ್ಮ ಇಲಾಖಾ ವಾಹನದಲ್ಲಿ ತುಂಬಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ದೇಹ ಛಿದ್ರಗೊಂಡು ಗಂಭೀರ ಗಾಯಗೊಂಡಿದ್ದ ಫಾತಿಮಾ ಅವರು ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ದೇಹದ ಮಾಂಸ ಖಂಡಗಳು ಕಾರಿನಲ್ಲೇ ಉಳಿದಿವೆ. ಕಾರು ಚಲಾಯಿಸುತ್ತಿದ್ದ ಮುಸ್ತಾಫನ ಕಾಲು ಮುರಿದಿದೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni car accident at Uchila in Mangalore, 85 year old killed, three hospitalised. The three were shifited by Traffic police constable in the early morning.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am