ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.
ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm