ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.
ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm