ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm