ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.
ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am