ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am