ಬ್ರೇಕಿಂಗ್ ನ್ಯೂಸ್
29-10-20 04:10 pm Mangalore Reporter ಕರಾವಳಿ
ಪುತ್ತೂರು, ಅಕ್ಟೋಬರ್ 29: ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಪಟ್ಟ ಪವಿತ್ರ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಂದು ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ತಿಂಗಳ ಹಿಂದೆ ಗುಪ್ತವಾಗಿ ಬಂದು ಫೋಟೊ ಶೂಟ್ ಮಾಡಿಕೊಂಡಿದ್ದು ಈ ಫೋಟೊ, ವಿಡಿಯೋಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತ ಸನಿಹದಲ್ಲೇ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ್ದಾಗಿದ್ದು, ಸಾಕ್ಷಾತ್ ಶಿವನೇ ಈ ಜಲಪಾತದಲ್ಲಿ ಸ್ನಾನಕ್ಕೆ ಆಗಮಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯ ಭಕ್ತರಲ್ಲಿದೆ.



ಇಂಥ ಪಾವಿತ್ರ್ಯ ಇರುವುದರಿಂದ ದೇವರಗುಂಡಿ ಫಾಲ್ಸ್ ನಲ್ಲಿ ಸ್ಥಳೀಯ ನಿವಾಸಿಗಳು ಸ್ನಾನ ಮಾಡುವುದಿಲ್ಲ. ಆದರೆ ಇದೀಗ ಬೆಂಗಳೂರಿನ ಬಿಕಿನಿ ಸುಂದರಿಯರು ಅರೆಬೆತ್ತಲಾಗಿ ದೇವರಗುಂಡಿ ಫಾಲ್ಸ್ ನಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಾಡೆಲ್ ಬೃಂದಾ ಅರಸ್ ಸೇರಿ ಇಬ್ಬರು ಮಾಡೆಲ್ ಗಳು ಈ ಪೋಟೋ ಶೂಟ್ ಮಾಡಿಸಿಕೊಂಡಿದ್ದು, ಈಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೊ ಶೂಟ್ ಬಗ್ಗೆ ಸ್ಥಳೀಯರು ದೇವಸ್ಥಾನದ ಆಡಳಿತ ಮಂಡಳಿಗೆ ದೂರನ್ನು ನೀಡಿದ್ದಾರೆ. ಆದರೆ ದೇವಸ್ಥಾನ ಮಂಡಳಿ, ನಾವು ಈ ಬಗ್ಗೆ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಿದೆ. ಯಾರೋ ದೇವಸ್ಥಾನ, ತೊಡಿಕಾನ ಪರಿಸರದ ಮಂದಿ ಬೆಂಗಳೂರಿನ ನೆಟ್ವರ್ಕ್ ಇರೋರು ಮಾಡೆಲ್ ಗಳನ್ನು ಕರೆಸಿ ಫೋಟೊ ಶೂಟ್ ಮಾಡಿಸಿರುವ ಸಾಧ್ಯತೆಯಿದೆ. ತಿಂಗಳ ಹಿಂದೆ ನೀರು ಹೆಚ್ಚಿದ್ದ ಸಂದರ್ಭದಲ್ಲಿ ಈ ಶೂಟಿಂಗ್ ಆಗಿದೆ ಎನ್ನಲಾಗುತ್ತಿದೆ.
Bikni photoshoot of models at Sullia Devara Gundi religious spot turns controversy after the pictures of the models goes viral on social media.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm