ಬ್ರೇಕಿಂಗ್ ನ್ಯೂಸ್
22-05-23 07:03 pm Mangalore Correspondent ಕರಾವಳಿ
ಮಂಗಳೂರು, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.
ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲೂ ದಿನವಹಿ ಆಗುಹೋಗುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಠಾಣಾಧಿಕಾರಿಗಳಿಗೆ ವರದಿ ಕೊಡಲು ಒಬ್ಬರು ಅಥವಾ ಇಬ್ಬರು ಸಿಬಂದಿ ಇರುತ್ತಾರೆ. ಠಾಣೆಯ ವ್ಯಾಪ್ತಿಯಲ್ಲಿ ಏನೇ ಕಿತಾಪತಿ ಆದರೂ, ಎಡವಟ್ಟು ನಡೆದರೂ ಅದಕ್ಕೆ ಅದೇ ಸಿಬಂದಿಯನ್ನು ಹೊಣೆ ಮಾಡಲಾಗುತ್ತದೆ.
Mangalore Illegal gambling at Talapady, Ullal police constable Vasudev suspended by Police commissioner Kuldeep Kumar Jain for showing negligence in duty. Recently a illegal gambling centre lead by a panchyath member was raided by Ullal Acp.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 02:04 pm
HK News Staffer
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am