ಬ್ರೇಕಿಂಗ್ ನ್ಯೂಸ್
29-10-20 05:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 29: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ಮುಚ್ಚಿ ಹಾಕಲು ತೆರೆಮರೆಯಲ್ಲಿ ಕಸರತ್ತು ನಡೆಸಿದ ಆರೋಪ ಎದುರಿಸುತ್ತಿರುವ ಪ್ರೊ.ಅರವಿ ಅವರನ್ನು ಸರಕಾರಿ ಸೇವೆಯಿಂದೇ ವಜಾಗೊಳಿಸಲು ಸಿಂಡಿಕೇಟ್ ಸಭೆ ನಿರ್ಧಾರ ಕೈಗೊಂಡಿದೆ.
ಬುಧವಾರ ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಗಂಭೀರ ಪ್ರಕರಣವಾಗಿದ್ದು, ಇದಕ್ಕೆ ವೃತ್ತಿ ಬಹಿಷ್ಕಾರ ಶಿಕ್ಷೆಯೇ ಸೂಕ್ತ ಎಂದು ನಿರ್ಣಯಕ್ಕೆ ಬರಲಾಗಿದೆ. ಆದರೆ, ಪ್ರೊಫೆಸರ್ ಆಗಿರುವ ವ್ಯಕ್ತಿಯನ್ನು ನೇರವಾಗಿ ತೆಗೆದು ಹಾಕುವಂತಿಲ್ಲ. ಆ ಕುರಿತು ಅಗತ್ಯ ಪ್ರಕ್ರಿಯೆ ನಡೆಯಬೇಕಾಗಿರುವುದರಿಂದ ಮೊದಲಿಗೆ ವಿವಿಯಿಂದ ನೋಟೀಸ್ ನೀಡಲು ನಿರ್ಧರಿಸಲಾಗಿದೆ.
ಇದೇ ವೇಳೆ, ಮಹಿಳಾ ಆಯೋಗವೂ ಪ್ರೊ.ಅರಬಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರೆ ವಜಾ ಶಿಕ್ಷೆ ತಕ್ಷಣವೇ ಜಾರಿಗೊಳಿಸುವ ಸಾಧ್ಯತೆಯಿದೆ. ಪ್ರೊ.ಅರಬಿ ಸೇವೆಯಿಂದ ವಜಾಗೊಂಡರೆ ಮಂಗಳೂರು ವಿವಿಯಲ್ಲಿ ಪ್ರೊಫೆಸರ್ ವಜಾ ಆಗುತ್ತಿರುವ 2ನೇ ಪ್ರಕರಣ ಇದಾಗಲಿದೆ. 10 ವರ್ಷಗಳ ಹಿಂದೆ ಪ್ರೊ.ತಿಪ್ಪೇಸ್ವಾಮಿ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿತ್ತು.
2018ರಲ್ಲಿ ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಅರಬಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳು ಕುಲಸಚಿವರಿಗೆ ದೂರು ನೀಡಿದ್ದರು. ಕುಲಸಚಿವರು ನಿರ್ಲಕ್ಷ್ಯ ವಹಿಸಿದ್ದರಿಂದ ಬಳಿಕ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಹಿಳಾ ಆಯೋಗದಿಂದ ಕೂಡಲೇ ಪ್ರಕರಣದ ತನಿಖೆ ನಡೆಸುವಂತೆ ಸೂಚನೆ ಬಂದಿತ್ತು. ಅದರಂತೆ, ಮಹಿಳಾ ಪ್ರೊಫೆಸರ್ ಮತ್ತು ವಕೀಲರನ್ನು ಒಳಗೊಂಡ ಆಂತರಿಕ ತನಿಖಾ ಸಮಿತಿ ರಚಿಸಿ ವಿವಿ ಆಡಳಿತ ವರದಿ ಕೇಳಿತ್ತು. ಆಬಳಿಕ ಮುಚ್ಚಿದ ಲಕೋಟೆಯಲ್ಲಿ ತನಿಖಾ ಸಮಿತಿ ನೀಡಿದ್ದ ವರದಿಯನ್ನು ವಿವಿಯ ಅಂದಿನ ಕುಲಸಚಿವ ಪ್ರೊ.ಎ.ಎಂ. ಖಾನ್, ಇಡೀ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಕಪಾಟಿನಲ್ಲೇ ಇರಿಸಿದ್ದರು.
2020ರ ಸೆಪ್ಟಂಬರ್ ತಿಂಗಳಲ್ಲಿ ಮಹಿಳಾ ಆಯೋಗ ಮತ್ತೆ ನೋಟೀಸ್ ನೀಡಿದ್ದರಿಂದ ಈಗಿನ ಕುಲಸಚಿವ ರಾಜು ಮೊಗವೀರ ಎಚ್ಚತ್ತುಕೊಂಡು ವರದಿಯನ್ನು ಕಳೆದ ಬಾರಿ ಸಿಂಡಿಕೇಟ್ ಸಭೆ ಮುಂದಿರಿಸಿದ್ದರು.
ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಅಂದಿನ ಕುಲಸಚಿವ ಎ.ಎಂ. ಖಾನ್ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ದೂರು ನೀಡುವ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಇದೆ.
Sexual Assault on student Syndicate team decides to terminate professor Arabi from Mangalore University.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm