ಬ್ರೇಕಿಂಗ್ ನ್ಯೂಸ್
23-05-23 05:28 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಪೊಲೀಸ್ ದೌರ್ಜನ್ಯದಿಂದ ತೀವ್ರ ಹಲ್ಲೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಅವಿನಾಶ್ ಅವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ಬಗ್ಗೆ ವೈದ್ಯರು ವರದಿ ಕೊಟ್ಟಿದ್ದಾರೆ. ಕಿವಿಯ ಸ್ಕ್ಯಾನಿಂಗ್ ವೇಳೆ ತಮಟೆಗೆ ಪೆಟ್ಟು ಬಿದ್ದಿರುವುದು ಕಂಡುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಆನಂತರ, ಮೇ 15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೀಡಾದ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬಂದಿದ್ದರು. ಇಬ್ಬರು ಕಾರ್ಯಕರ್ತರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಠಾಣೆಯ ಎಸ್ಐ ಮತ್ತು ಪೊಲೀಸ್ ಸಿಬಂದಿ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂಪ್ಯ ಠಾಣೆ ಎಸ್ಐ ಮತ್ತು ಸಿಬಂದಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿತ್ತು.
ತೀವ್ರ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದ್ದು ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರು ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾಗಿದ್ದು ಎರಡು ದಿನದೊಳಗೆ ಹಲ್ಲೆ ನಡೆಸಿರುವ ಡಿವೈಎಸ್ಪಿ ಅಧಿಕಾರಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕ್ರಮ ಜರುಗಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Puttur Police Autrocity over BJP banner row, Victim Avinash ear drum damaged, Arun Puthila demands DYSP suspension for brutal third degree tortured on seven hindu karyakartas arrested over footwear garland on Nalin Kateel and Sadananada Gowda banner.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm