ಬ್ರೇಕಿಂಗ್ ನ್ಯೂಸ್
23-05-23 05:28 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಪೊಲೀಸ್ ದೌರ್ಜನ್ಯದಿಂದ ತೀವ್ರ ಹಲ್ಲೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಅವಿನಾಶ್ ಅವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ಬಗ್ಗೆ ವೈದ್ಯರು ವರದಿ ಕೊಟ್ಟಿದ್ದಾರೆ. ಕಿವಿಯ ಸ್ಕ್ಯಾನಿಂಗ್ ವೇಳೆ ತಮಟೆಗೆ ಪೆಟ್ಟು ಬಿದ್ದಿರುವುದು ಕಂಡುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಆನಂತರ, ಮೇ 15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೀಡಾದ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬಂದಿದ್ದರು. ಇಬ್ಬರು ಕಾರ್ಯಕರ್ತರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಠಾಣೆಯ ಎಸ್ಐ ಮತ್ತು ಪೊಲೀಸ್ ಸಿಬಂದಿ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂಪ್ಯ ಠಾಣೆ ಎಸ್ಐ ಮತ್ತು ಸಿಬಂದಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿತ್ತು.
ತೀವ್ರ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದ್ದು ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರು ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾಗಿದ್ದು ಎರಡು ದಿನದೊಳಗೆ ಹಲ್ಲೆ ನಡೆಸಿರುವ ಡಿವೈಎಸ್ಪಿ ಅಧಿಕಾರಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕ್ರಮ ಜರುಗಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Puttur Police Autrocity over BJP banner row, Victim Avinash ear drum damaged, Arun Puthila demands DYSP suspension for brutal third degree tortured on seven hindu karyakartas arrested over footwear garland on Nalin Kateel and Sadananada Gowda banner.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm