ಬ್ರೇಕಿಂಗ್ ನ್ಯೂಸ್
27-05-23 11:21 am Mangalore Correspondent ಕರಾವಳಿ
ಮಂಗಳೂರು, ಮೇ 27: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಲಾಗಿದ್ದ ತಾತ್ಕಾಲಿಕ ನೇಮಕಾತಿಯ ಉದ್ಯೋಗಕ್ಕೆ ಕತ್ತರಿ ಬಿದ್ದಿದೆ. ಹಿಂದಿನ ಸರಕಾರ ಕೈಗೊಂಡಿದ್ದ ಎಲ್ಲ ರೀತಿಯ ತಾತ್ಕಾಲಿಕ ನೇಮಕಾತಿಗಳನ್ನು ಕಾಂಗ್ರೆಸ್ ಸರಕಾರ ರದ್ದುಪಡಿಸಿರುವುದರಿಂದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ನೀಡಲಾಗಿದ್ದ ಉದ್ಯೋಗವೂ ಕಡಿತಗೊಂಡಿದೆ.
ಕಳೆದ 2022ರ ಸೆಪ್ಟಂಬರ್ ತಿಂಗಳ 22ರಂದು ಪ್ರವೀಣ್ ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಅನುಕಂಪದ ಮೇಲೆ ಉದ್ಯೋಗ ಕಲ್ಪಿಸಲಾಗಿತ್ತು. ಆದೇಶದ ಪ್ರತಿಯಲ್ಲಿ ಮುಖ್ಯಮಂತ್ರಿ ಪದಾಧಿಕಾರ ಇರುವ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಮಾತ್ರ ಎಂದು ಉಲ್ಲೇಖ ಮಾಡಿದ್ದು, ಅದೇ ಈಗ ಮುಳುವಾಗಿದೆ. ರಾಜ್ಯದಲ್ಲಿ ಸರಕಾರ ಬದಲಾಗುತ್ತಿದ್ದಂತೆ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಕತ್ತರಿ ಹಾಕಲಾಗಿದೆ. ಸರಕಾರಿ ಸೇವೆಯಲ್ಲಿದ್ದು ಮೃತಪಟ್ಟ ನೌಕರರ ಪತ್ನಿಯರಿಗೆ ಅರ್ಹತೆ ಆಧಾರದಲ್ಲಿ ನೇಮಕಾತಿ ನಡೆಸುತ್ತಾರೆ. ಅದೇ ರೀತಿ ಪ್ರವೀಣ್ ಪತ್ನಿಗೂ ಉದ್ಯೋಗ ನೇಮಕಾತಿ ಮಾಡಿದ್ದು, ಆದೇಶ ಪ್ರತಿಯಲ್ಲಿ ಮುಖ್ಯಮಂತ್ರಿ ಅಧಿಕಾರದಲ್ಲಿ ಇರುವವರೆಗೆ ಮಾತ್ರ ಎಂದು ಉಲ್ಲೇಖಿಸಿ ಬಿಜೆಪಿ ಸರಕಾರ ಎಡವಟ್ಟು ಮಾಡಿಕೊಂಡಿದೆ.
ಬೆಂಗಳೂರಿಗೆ ಉದ್ಯೋಗಕ್ಕೆ ಹೋಗುವುದು ಕಷ್ಟ ಎಂಬ ನೆಲೆಯಲ್ಲಿ ಆನಂತರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕುಮಾರಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಅಕ್ಟೋಬರ್ 1ರಿಂದ ಉದ್ಯೋಗ ಸೇರಿದ್ದ ನೂತನ ಕುಮಾರಿಗೆ ಇದೀಗ ನೌಕರಿ ಕಡಿತ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ರವಿಕುಮಾರ್ ಬಳಿ ಕೇಳಿದಾಗ, ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡ ಹುದ್ದೆಗಳು ಸರಕಾರ ಬದಲಾದಾಗ ರದ್ದುಗೊಳ್ಳುವುದು ಸಹಜ ಪ್ರಕ್ರಿಯೆ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಇವರನ್ನು ಮುಂದುವರಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಿಂದ ಕಾರ್ಯಕರ್ತರ ಆಕ್ರೋಶದಿಂದ ತೀವ್ರ ಮುಜುಗರಕ್ಕೀಡಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಪ್ರವೀಣ್ ಪತ್ನಿಗೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿ ಉದ್ಯೋಗ ದೊರಕಿಸುವ ಕೆಲಸ ಮಾಡಿದ್ದರು. ಆದರೆ ತಾತ್ಕಾಲಿಕ ನೇಮಕಾತಿಯಿಂದಾಗಿ ಈಗ ಸರಕಾರ ಬದಲಾಗುತ್ತಿದ್ದಂತೆ ಕೆಲಸ ಕಳಕೊಂಡಿದ್ದು, ಮತ್ತೆ ನಳಿನ್ ಕುಮಾರ್ ಆಕ್ರೋಶಕ್ಕೆ ತುತ್ತಾಗಿದ್ದಾರೆ.
Karnataka congress govt withdraws appointment order of Praveen Nettaru’s wife, after blunder by BJP government in Mangalore. Nutan Kumari, wife of the murdered BJP Yuva Morcha leader, was offered a Group C post on contract basis in the office of former Chief Minister Basavaraj Bommai.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm