ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm