ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm