ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm