ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am