ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm