ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm