ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm