ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm