ಬ್ರೇಕಿಂಗ್ ನ್ಯೂಸ್
31-05-23 09:04 am Mangaluru Correspondent ಕರಾವಳಿ
ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆ ಇಂದು ನಸುಕಿನಲ್ಲಿ ದಾಳಿ ಕಾರ್ಯಾಚರಣೆ ನಡೆದಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯ ಪೊಲೀಸರ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭಯೋತ್ಪಾದಕ ಕೃತ್ಯಕ್ಕಾಗಿ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ರವಾನೆ ಆಗುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ದಕ್ಷಿಣ ಭಾರತದಲ್ಲಿ ಬೇರು ಬಿಟ್ಟಿರುವ ಪಿಎಫ್ಐ ಹವಾಲಾ ಹಣದ ಜಾಲ ಬೆನ್ನತ್ತಿರುವ ಎನ್ಐಎ ತಂಡ ಕಳೆದೊಂದು ವರ್ಷದಲ್ಲಿ ತನಿಖೆ ನಡೆಸುತ್ತಿದೆ.
ತನಿಖೆಯಲ್ಲಿ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆಯಾಗಿತ್ತು. ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪತ್ತೆಯಾಗಿದ್ದ ಫುಲ್ವಾರಿ ಶರೀಫ್ ಪ್ರಕರಣದ ಬಳಿಕ ಈ ಕುರಿತ ತನಿಖೆ ಚುರುಕುಗೊಂಡಿತ್ತು. ಬಿಹಾರದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು ತನಿಖೆಯಲ್ಲಿ ಕಂಡುಬಂದಿತ್ತು.
ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್ಐಎ ಅಧಿಕಾರಿಗಳು ಎರಡು ತಿಂಗಳ ಹಿಂದೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದರು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಮತ್ತು ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಬಂಧಿಸಲಾಗಿತ್ತು.
ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷ್ಯಗಳು ಮತ್ತು ಬೇನಾಮಿ ಖಾತೆಗಳಲ್ಲಿ ಕೋಟ್ಯಂತರ ರೂ. ವಹಿವಾಟು ನಡೆಸಿದ್ದು ಪತ್ತೆಯಾಗಿತ್ತು. ಇದೇ ನೆಟ್ವರ್ಕ್ ಆಧರಿಸಿ ಅಧಿಕಾರಿಗಳ ತಂಡ ಕಾರ್ಯಾಚರಣೆ ಮುಂದುವರಿಸಿದೆ.
PFI Hawala network, NIA Raid 16 places of Mangalore, Dakshina kannada, Many taken to custody with the help of local police. Searches were conducted at 16 locations leading to the seizure of multiple digital devices and incriminating documents containing details of transactions running into several crores of rupees," a spokesperson of the agency said.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm