ಬ್ರೇಕಿಂಗ್ ನ್ಯೂಸ್
01-06-23 08:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ವಿಧಾನಸಭೆ ಚುನಾವಣೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಅಮಾನತು ಮಾಡಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಡಿ ಜಯಣ್ಣ ಕರ್ತವ್ಯ ಲೋಪ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತು ಆದೇಶ ಮಾಡಿದ್ದಾರೆ. ಆದರೆ, ತನ್ನ ಮೇಲೆ ಮಾಡಿರುವ ಆರೋಪಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಯು) ಜಯಣ್ಣ ನಿರಾಕರಿಸಿದ್ದಾರೆ.
ಜಯಣ್ಣ ಅವರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಹೊರಡಿಸಿದ ನೋಟಿಸ್ ಗೆ ಮೇ 22 ರಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಲ್ಲಿ ಡಿಡಿಪಿಯು ಅವರನ್ನು ಅಮಾನತು ಮಾಡಲಾಗಿದೆ. ಇದೀಗ ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹುದ್ದೆಗೆ ಪ್ರಭಾರವಾಗಿ ನೇಮಕ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮೇ 9 ರಂದು ಚುನಾವಣೆಯ ಪೂರ್ವ ಸಿದ್ಧತೆ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಹಾಜರಿರುವಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಜಯಣ್ಣ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗಿತ್ತು. ಆಗ ಪೋನ್ ಸ್ವೀಕರಿಸಿದ ಜಯಣ್ಣ ಅವರು ತಾವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಾಖಲೆಗಳನ್ನು ಸಲ್ಲಿಸಲು ಬೆಂಗಳೂರಿಗೆ ತೆರಳುತ್ತಿದ್ದೇನೆ, ಆದಕಾರಣ ಪತ್ರಿಕಾಗೋಷ್ಠಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಯ ಅನುಮತಿಯನ್ನು ಪಡೆಯದೆ ಜಿಲ್ಲಾ ಕೇಂದ್ರವನ್ನು ತೊರೆಯುವ ಮೂಲಕ ಜಯಣ್ಣ ಅವರು ಚುನಾವಣಾ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದರು.
The district election officer, deputy commissioner (DC) Ravikumar M R has suspended Dakshina Kannada Pre-University Education department deputy director Jayanna C D over dereliction of duty during elections.
01-04-26 08:56 pm
HK News Staffer
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm