ಬ್ರೇಕಿಂಗ್ ನ್ಯೂಸ್
01-06-23 08:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ವಿಧಾನಸಭೆ ಚುನಾವಣೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಅಮಾನತು ಮಾಡಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಡಿ ಜಯಣ್ಣ ಕರ್ತವ್ಯ ಲೋಪ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತು ಆದೇಶ ಮಾಡಿದ್ದಾರೆ. ಆದರೆ, ತನ್ನ ಮೇಲೆ ಮಾಡಿರುವ ಆರೋಪಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಯು) ಜಯಣ್ಣ ನಿರಾಕರಿಸಿದ್ದಾರೆ.
ಜಯಣ್ಣ ಅವರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಹೊರಡಿಸಿದ ನೋಟಿಸ್ ಗೆ ಮೇ 22 ರಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಲ್ಲಿ ಡಿಡಿಪಿಯು ಅವರನ್ನು ಅಮಾನತು ಮಾಡಲಾಗಿದೆ. ಇದೀಗ ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹುದ್ದೆಗೆ ಪ್ರಭಾರವಾಗಿ ನೇಮಕ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮೇ 9 ರಂದು ಚುನಾವಣೆಯ ಪೂರ್ವ ಸಿದ್ಧತೆ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಹಾಜರಿರುವಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಜಯಣ್ಣ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗಿತ್ತು. ಆಗ ಪೋನ್ ಸ್ವೀಕರಿಸಿದ ಜಯಣ್ಣ ಅವರು ತಾವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಾಖಲೆಗಳನ್ನು ಸಲ್ಲಿಸಲು ಬೆಂಗಳೂರಿಗೆ ತೆರಳುತ್ತಿದ್ದೇನೆ, ಆದಕಾರಣ ಪತ್ರಿಕಾಗೋಷ್ಠಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಯ ಅನುಮತಿಯನ್ನು ಪಡೆಯದೆ ಜಿಲ್ಲಾ ಕೇಂದ್ರವನ್ನು ತೊರೆಯುವ ಮೂಲಕ ಜಯಣ್ಣ ಅವರು ಚುನಾವಣಾ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದರು.
The district election officer, deputy commissioner (DC) Ravikumar M R has suspended Dakshina Kannada Pre-University Education department deputy director Jayanna C D over dereliction of duty during elections.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm