ಬ್ರೇಕಿಂಗ್ ನ್ಯೂಸ್
01-06-23 08:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ವಿಧಾನಸಭೆ ಚುನಾವಣೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಅಮಾನತು ಮಾಡಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಡಿ ಜಯಣ್ಣ ಕರ್ತವ್ಯ ಲೋಪ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತು ಆದೇಶ ಮಾಡಿದ್ದಾರೆ. ಆದರೆ, ತನ್ನ ಮೇಲೆ ಮಾಡಿರುವ ಆರೋಪಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಯು) ಜಯಣ್ಣ ನಿರಾಕರಿಸಿದ್ದಾರೆ.
ಜಯಣ್ಣ ಅವರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಹೊರಡಿಸಿದ ನೋಟಿಸ್ ಗೆ ಮೇ 22 ರಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಲ್ಲಿ ಡಿಡಿಪಿಯು ಅವರನ್ನು ಅಮಾನತು ಮಾಡಲಾಗಿದೆ. ಇದೀಗ ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹುದ್ದೆಗೆ ಪ್ರಭಾರವಾಗಿ ನೇಮಕ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮೇ 9 ರಂದು ಚುನಾವಣೆಯ ಪೂರ್ವ ಸಿದ್ಧತೆ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಹಾಜರಿರುವಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಜಯಣ್ಣ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗಿತ್ತು. ಆಗ ಪೋನ್ ಸ್ವೀಕರಿಸಿದ ಜಯಣ್ಣ ಅವರು ತಾವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಾಖಲೆಗಳನ್ನು ಸಲ್ಲಿಸಲು ಬೆಂಗಳೂರಿಗೆ ತೆರಳುತ್ತಿದ್ದೇನೆ, ಆದಕಾರಣ ಪತ್ರಿಕಾಗೋಷ್ಠಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಯ ಅನುಮತಿಯನ್ನು ಪಡೆಯದೆ ಜಿಲ್ಲಾ ಕೇಂದ್ರವನ್ನು ತೊರೆಯುವ ಮೂಲಕ ಜಯಣ್ಣ ಅವರು ಚುನಾವಣಾ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದರು.
The district election officer, deputy commissioner (DC) Ravikumar M R has suspended Dakshina Kannada Pre-University Education department deputy director Jayanna C D over dereliction of duty during elections.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm