ಬ್ರೇಕಿಂಗ್ ನ್ಯೂಸ್
03-06-23 10:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬಾಬಾ ರಾಮದೇವ್ ಮಾಲಕತ್ವದ ಪತಂಜಲಿ ಬ್ರಾಂಡಿನ ರುಚಿಗೋಲ್ಡ್ ತೈಲ ಇನ್ನಿತರ ಆಹಾರ ಉತ್ಪಾದಕ ಘಟಕದಿಂದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ನೇರವಾಗಿ ಹರಿಸಲಾಗುತ್ತಿದ್ದು ಈ ಬಗ್ಗೆ ಜನಾಕ್ರೋಶ ಉಂಟಾಗಿರುವುದರಿಂದ ಕೈಗಾರಿಕಾ ಘಟಕವನ್ನು ಮುಚ್ಚುವಂತೆ ಮಂಗಳೂರಿನ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೈಗಾರಿಕಾ ಘಟಕದಿಂದ ಅಕ್ರಮ ಕೊಳವೆಗಳನ್ನು ಹೊರಗೆ ಬಿಟ್ಟು ನದಿಗೆ ಸಾಗುವ ತೋಡುಗಳಿಗೆ ತ್ಯಾಜ್ಯಗಳನ್ನು ಹರಿಯ ಬಿಡಲಾಗುತ್ತಿದೆ. ಜನರ ಆಕ್ರೋಶ ಕೇಳಿಬಂದಿದ್ದರಿಂದ ರಾಶಿ ಬಿದ್ದ ತ್ಯಾಜ್ಯವನ್ನು ಕಾರ್ಮಿಕರ ಮೂಲಕ ಕಂಪನಿಯವರೇ ತೆರವು ಮಾಡುವ ಯತ್ನ ಮಾಡಿದ್ದಾರೆ. ಸ್ಥಳದಿಂದ ತೆರವುಗೊಳಿಸಿ ಸಮುದ್ರಕ್ಕೆ ಸುರಿಯುವ ಪ್ರಯತ್ನ ಮಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ನಾಗರಿಕ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡ ಭೇಟಿ ನೀಡಿದ್ದು ಹೋರಾಟದ ಎಚ್ಚರಿಕೆ ನೀಡಿದರು.


ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಜೊತೆ ಮಾತನಾಡಿ, ಕಂಪೆನಿಗೆ ತಕ್ಷಣದಿಂದಲೇ ಬೀಗ ಜಡಿಯಲು ಆಗ್ರಹಿಸಲಾಯಿತು. ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಘಟಕವು ಪತಂಜಲಿ ಕೈಗಾರಿಕಾ ಘಟಕ ಮುಚ್ಚುವಂತೆ ಕೇಂದ್ರ ಕಚೇರಿಗೆ ಶಿಫಾರಸ್ಸು ಮಾಡಿ ದಾಖಲೆ ಸಹಿತ ಪತ್ರ ಬರೆದಿರುವುದಾಗಿ ಅಧಿಕಾರಿಗಳು ಹೋರಾಟ ಸಮಿತಿಯ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಕಂಪೆನಿಯ ಮುಂದೆ ಸಾಂಕೇತಿಕ ಪ್ರತಿಭಟನೆ
ಗಂಭೀರವಾದ ಕ್ರಿಮಿನಲ್ ಅಪರಾಧ ಎಸಗಿರುವ, ಪರಿಸರ ನಿಯಮಗಳನ್ನು ಉಲ್ಲಂಘಿಸಿರುವ ಪತಂಜಲಿ ಘಟಕವನ್ನು ತಕ್ಷಣವೆ ಮುಚ್ಚಿ ಬೀಗ ಜಡಿಯಲು ಹೋರಾಟ ಸಮಿತಿ ಸದಸ್ಯರು ಆಗ್ರಹಿಸಿದರು. ನಿರ್ಣಾಯಕ ಕ್ರಮ ಜರುಗದಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಯಿತು.
ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ತೋಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಫಾರೂಕ್ ಜೋಕಟ್ಟೆ, ಮಾಜಿ ಅಧ್ಯಕ್ಷ ಕೆವಿನ್, ಹೋರಾಟ ಸಮಿತಿ ಪ್ರಮುಖರಾದ ಅಬೂಬಕ್ಕರ್ ಬಾವಾ, ಶ್ರೀನಾಥ್ ಕುಲಾಲ್, ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ನಿತಿನ್ ಬಂಗೇರ, ಮನೋಜ್ ಉರ್ವಸ್ಟೋರ್, ಇಕ್ಬಾಲ್ ಜೋಕಟ್ಟೆ, ಲಾನ್ಸಿ ಜೋಕಟ್ಟೆ, ಚಂದ್ರಶೇಖರ್ ಜೋಕಟ್ಟೆ, ಹನೀಫ್ ಜೋಕಟ್ಟೆ, ಗ್ರಾಪಂ ಮಾಜಿ ಉಪಾಧ್ಯಕ್ಷ ಸಂಶು ಇದ್ದಿನಬ್ಬ, ಹನೀಫ್ ಇಡ್ಯಾ, ವಿಜಯ್ ಅರಾನ್ಹ ಮತ್ತಿತರರು ಹಾಜರಿದ್ದರು.
Mangalore Patanjali ruchi gold polluts Palguni river water will chemicals, localities demand shot down of factory.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 01:13 pm
HK News Staffer
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm