ಬ್ರೇಕಿಂಗ್ ನ್ಯೂಸ್
04-06-23 07:21 pm Mangalore Correspondent ಕರಾವಳಿ
ಉಳ್ಳಾಲ, ಜೂ.4: ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರಿಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಶವಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಆಪ್ತನ ಶವದ ಚಟ್ಟಕ್ಕೆ ಹೆಗಲು ಕೊಟ್ಟು ಸರಳತೆ ಮೆರೆದಿದ್ದಾರೆ.
ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಷಯ ತಿಳಿದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಶರತ್ ಕಾಜವ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಕುಟುಂಬ, ಸಂಬಂಧಿಕರಿಗೆ ಧೈರ್ಯ ತುಂಬಿದ ಅವರು ಅಂತಿಮ ವಿಧಿ ವಿದಾನದಲ್ಲಿ ಪಾಲ್ಗೊಂಡದ್ದಲ್ಲದೆ ಶವದ ಚಟ್ಟಕ್ಕೂ ಹೆಗಲು ಕೊಟ್ಟು ಅಂತಿಮ ಯಾತ್ರೆಯಲ್ಲಿ ಸಾಗಿದ್ದಾರೆ.









ಈ ಮೂಲಕ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿಯವರು ಹಾಕಿಕೊಟ್ಟ ಸಂಪ್ರದಾಯವನ್ನು ಮುಂದುವರಿಸಿದ ಶಾಸಕರು ಎಂಬ ಕೀರ್ತಿಗೆ ಯು.ಟಿ ಖಾದರ್ ಭಾಜನರಾಗಿದ್ದಾರೆ. ನರಿಂಗಾನ ಕಂಬಳ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಮೃತ ಶರತ್ ಕಾಜವ ಅವರು ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ ಅವರು ನರಿಂಗಾನ ಕಂಬಳದ ಯಶಸ್ಸಿಗಾಗಿ ವಾರಗಳ ಕಾಲ ದುಡಿದಿದ್ದರು. ತಾಯಿಯ ಅನಾರೋಗ್ಯ ಇದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Mudipu block congress president brother Sharath dies of heart attack, Speaker Khader helps to carry body for last rites in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm