ಬ್ರೇಕಿಂಗ್ ನ್ಯೂಸ್
05-06-23 10:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹಲ್ಲೆಗೀಡಾದ ಯುವಕರ ಪೈಕಿ ಒಬ್ಬನ ಸೋದರ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟು ಹೇಳಿಕೆ ಪಡೆಯುವ ಸಂದರ್ಭದಲ್ಲಿ ಉಳ್ಳಾಲ ಎಸ್ಐ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ.
ಹಲ್ಲೆಗೀಡಾದ ಯುವಕರನ್ನು ಹೇಳಿಕೆ ಪಡೆಯುವುದಕ್ಕಾಗಿ ಘಟನೆ ನಡೆದ ಮಾರನೇ ದಿನ ಠಾಣೆಗೆ ಕರೆಸಲಾಗಿತ್ತು. ಈ ವೇಳೆ, ಆಶಿಕ್ ಎನ್ನುವಾತನ ಸೋದರ ಮಹಮ್ಮದ್ ಎಂಬಾತ ಜೊತೆಗೆ ಬಂದಿದ್ದು, ಇದೇ ರೀತಿ ಹೇಳಿಕೆ ನೀಡುವಂತೆ ಸೂಚಿಸುತ್ತಿದ್ದ ಎನ್ನಲಾಗಿದೆ. ಈ ವಿಚಾರದಲ್ಲಿ ಆಕ್ಷೇಪಿಸಿದ ಎಸ್ಐ ಸಂತೋಷ್, ನೀನು ಆ ಜಾಗದಲ್ಲಿ ಇರಲಿಲ್ಲ ಅಲ್ವಾ.. ನೀನು ಹೇಳಿದ ಹಾಗೆ ಬರೆಯಬೇಕು ಎಂದು ಹೇಳಿದರೆ ಹೇಗೆ.. ನೀನು ಹೊರಗೆ ಹೋಗು. ಅಲ್ಲಿದ್ದ ಯುವಕರು ಹೇಳಿದ ರೀತಿಯಲ್ಲಿ ಬರೆದುಕೊಳ್ತೇವೆ ಎಂದಿದ್ದಾರೆ.
ಇದನ್ನು ವಿರೋಧಿಸಿದ್ದ ಆ ವ್ಯಕ್ತಿ, ಪೊಲೀಸರಿಗೆ ನೋಡಿಕೊಳ್ತೇನೆ ಎಂದು ಹೇಳಿ ಹೊರಬಂದಿದ್ದನಂತೆ. ಇದೇ ವಿಚಾರದಲ್ಲಿ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟಿದ್ದು, ಹೇಳಿಕೆ ಪಡೆಯುವ ಸಂದರ್ಭದಲ್ಲಿ ಖಾಲಿ ಕಾಗದಕ್ಕೆ ಸಹಿ ಮಾಡಿಸಿದ್ದಾರೆ, ನಾವು ಹೇಳಿದ ರೀತಿಯಲ್ಲಿ ಹೇಳಿಕೆ ದಾಖಲು ಮಾಡಿಲ್ಲ. ವಿದ್ಯಾರ್ಥಿನಿಯರನ್ನು ಠಾಣೆಯಲ್ಲಿ ಕುಳ್ಳಿರಿಸಿ ಕಾಯುವಂತೆ ಮಾಡಿದ್ದಾರೆಂದು ಆರೋಪಿಸಿದ್ದಾನೆ. ದೂರಿನ ಬಗ್ಗೆ ತನಿಖೆ ನಡೆಸಲು ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರಿಗೆ ವಹಿಸಿದ್ದಾರೆ.
ಉಳ್ಳಾಲ ಪೊಲೀಸರಲ್ಲಿ ಈ ಬಗ್ಗೆ ಮಾಹಿತಿ ಕೇಳಿದಾಗ, ಯಾವುದೇ ಖಾಲಿ ಕಾಗದಕ್ಕೆ ಸಹಿ ಪಡೆದಿಲ್ಲ. ಹೇಳಿಕೆ ಪಡೆಯುವ ಸಂದರ್ಭದಲ್ಲಿ ಸೋದರ ಬಂದು ಆಕ್ಷೇಪಿಸಿದ್ದಕ್ಕೆ ಜೋರು ಮಾಡಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಕಾಸರಗೋಡು ಮೂಲದ ಮೂವರು ಯುವಕರಿಗೆ ಹಿಂದು ಸಂಘಟನೆಯ ಯುವಕರು ಹಲ್ಲೆ ನಡೆಸಿದ್ದರು. ಹಿಂದು ಯುವತಿಯರ ಜೊತೆಗೆ ಬೀಚ್ ನಲ್ಲಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಯುವಕರ ಕಡೆಯವರು ಸ್ಪಷ್ಟನೆ ನೀಡುತ್ತಿದ್ದಾರೆ. ಪ್ರಕರಣ ಸಂಬಂಧಿಸಿ ಎಂಟು ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Mangalore Moral Policing, victims allege of beaten up by Ullal Police Inspector, Kuldeep Jain orders for enquiry on this matter. The victim also has alleged that the Inapector has taken his signature on blank paper. Commissioner Kuldeep has ordered a probe through DCP.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm