ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm