ಬ್ರೇಕಿಂಗ್ ನ್ಯೂಸ್
07-06-23 12:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಕರಾವಳಿಯಲ್ಲಿ ಇನ್ನೂ ಮಳೆ ಶುರುವಾಗದ ಕಾರಣ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತೀವ್ರ ಜಲಕ್ಷಾಮದಿಂದಾಗಿ ಭಕ್ತರಿಗೆ ಬಿಸಿ ತಟ್ಟಿದೆ. ಕಟೀಲು ದೇಗುಲದಲ್ಲಿ ದಿನವೂ 15ರಿಂದ 20 ಸಾವಿರ ಭಕ್ತರು ಭೇಟಿ ನೀಡುತ್ತಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಇದೆ. ಆದರೆ ಈಗ ನೀರಿನ ಕೊರತೆಯಿಂದಾಗಿ ಸಮಸ್ಯೆ ಎದುರಾಗಿದೆ.
ಊಟಕ್ಕೆ ಪ್ಲೇಟ್ ಬದಲು ಬಳಸಿ ಎಸೆಯುವ ಹಾಳೆ ತಟ್ಟೆ, ಬಾಳೆ ಎಲೆಯನ್ನು ಬಳಸಲಾಗುತ್ತಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಭಕ್ತರು ಕೈಕಾಲು ತೊಳೆಯುವ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ದೇಗುಲದ ಸಮಗ್ರ ವ್ಯವಸ್ಥೆಗೆ ದಿನಂಪ್ರತಿ 7 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು ನೀರು ಸರಬರಾಜು ಮಾಡುತ್ತಿದ್ದ ಬೋರ್ ವೆಲ್ಗಳೂ ಬತ್ತಲಾರಂಭಿಸಿವೆ. ಬೋರ್ ವೆಲ್ನಲ್ಲಿ ಪ್ರತಿ ದಿನ 10ರಿಂದ 15 ನಿಮಿಷ ಮಾತ್ರ ನೀರು ಬರುತ್ತಿದ್ದು, ಖಾಸಗಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೂ ಶೌಚಾಲಯ, ಅತಿಥಿ ಗೃಹಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ.
ಕಟೀಲು ದೇವಸ್ಥಾನಕ್ಕೆ ಸಂಬಂಧಪಟ್ಟ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬಂದಿ ಸೇರಿ ಸುಮಾರು 3 ಸಾವಿರ ಮಂದಿಯಿದ್ದು ನೀರಿನ ಸಮಸ್ಯೆಯಿಂದಾಗಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಅರ್ಧ ದಿನಕ್ಕೆ ತರಗತಿಗಳನ್ನು ನಡೆಸಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸಲು ನೀರಿನ ಕೊರತೆ ಎದುರಾಗಿದ್ದರಿಂದ ಅರ್ಧ ದಿನಕ್ಕೆ ಶಾಲೆ ಬಿಡಲಾಗುತ್ತಿದೆ. ಕಟೀಲು ದೇವಸ್ಥಾನದ ಗೋಶಾಲೆಗಳಿಗೂ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ನಲ್ಲಿ ನೀರು ತರಿಸಲಾಗುತ್ತಿದೆ. ದೇವಸ್ಥಾನವನ್ನು ಸುತ್ತುವರಿದು ಹರಿಯುವ ನಂದಿನಿ ನದಿ ಪೂರ್ತಿಯಾಗಿ ಬತ್ತಿ ಹೋಗಿದ್ದು, ನೀರಿನ ಸಂಪನ್ಮೂಲ ಕಂಡುಕೊಳ್ಳಲು ಮತ್ತೆ ಬಾವಿ ಕೊರೆಯಲು ದೇವಸ್ಥಾನದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಮಳೆ ಬಂದು ನೀರು ತುಂಬಿಕೊಳ್ಳುವ ವರೆಗೂ ಕಟೀಲು ದೇಗುಲದಲ್ಲಿ ನೀರಿಗೆ ಸಮಸ್ಯೆ ಎದುರಾಗಲಿದೆ.
Scorching Summer, no water even to wash hands and legs at Kateel Temple in Mangalore
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm