ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am