ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
04-06-26 07:35 pm
HK News Staffer
Pv Mohan: ಜೂನ್ 18ರಂದು ವಿಧಾನ ಪರಿಷತ್ ಚುನಾವಣೆ ;...
03-06-26 10:19 pm
ಡಿಕೆ ಯುಗಾರಂಭ ; ಎಲ್ಲಾ ಶಾಲಾ - ಕಾಲೇಜು ವಿದ್ಯಾರ್ಥಿ...
03-06-26 09:19 pm
DK Shivakumar New CM, 2026: ರಾಜ್ಯದಲ್ಲಿ ಡಿಕೆಶಿ...
03-06-26 05:41 pm
29ನೇ ಹರೆಯದಲ್ಲೇ ಸಚಿವ, ಬಂಗಾರಪ್ಪ- ಎಸ್ಸೆಂ ಕೃಷ್ಣ ಗ...
03-06-26 03:51 pm
04-06-26 04:19 pm
HK News Staffer
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
ನೀಟ್, ಸಿಬಿಎಸ್ಇ ಪರೀಕ್ಷೆ ಅಕ್ರಮ; ಸಚಿವ ಧರ್ಮೇಂದ್ರ...
02-06-26 10:40 am
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
ಪ್ರಧಾನಿ ಮೋದಿ ಕರೆ ಎಫೆಕ್ಟ್ ; ದೇಶಾದ್ಯಂತ ಚಿನ್ನ ಖರ...
31-05-26 09:25 pm
04-06-26 12:51 pm
HK News Staffer
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
Ivan Dsouza, Congress: ಐವಾನ್ ಡಿಸೋಜಗೆ ಸಚಿವ ಸ್ಥ...
01-06-26 07:05 pm
04-06-26 09:41 pm
HK News Staffer
ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ನಾಲ್...
04-06-26 05:31 pm
ದೆಹಲಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ ; 21 ಮಂದಿ...
04-06-26 03:29 pm
ಉಡುಪಿ ; ನೀರು ಸೇದುತ್ತಿದ್ದಾಗ ಬಾವಿಯೊಳಕ್ಕೆ ಬಿದ್ದ...
04-06-26 12:49 pm
ಮೊಬೈಲ್ ಚಟ ಬಿಟ್ಟು ಬಿಡುವಂತೆ ಗದರಿದ ತಾಯಿ; ಸುಳ್ಯದಲ...
02-06-26 09:27 pm