ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm