ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm