ಬ್ರೇಕಿಂಗ್ ನ್ಯೂಸ್
07-06-23 09:13 pm Mangalore Correspondent ಕರಾವಳಿ
ಮಂಗಳೂರು, ಜೂ.7: ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆ ನಡೆಸುವುದಕ್ಕಾಗಿ ಹೃದಯ ತಜ್ಞರೇ ಹಳ್ಳಿ ಹಳ್ಳಿಗೆ ತೆರಳಿ, ಜನರನ್ನು ಉಚಿತವಾಗಿ ಪರೀಕ್ಷೆ ನಡೆಸುವ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ.
ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ "ಹೃದಯ ತಜ್ಞ ಮನೆ ಬಾಗಿಲಿಗೆ" ಯೋಜನೆಗೆ ಚಾಲನೆ ನೀಡಲಾಯಿತು.



ಈ ವೇಳೆ ಮಾತನಾಡಿದ ಜಿಪಂ ಸಿಇಓ ಡಾ.ಕುಮಾರ್, ಯೋಜನೆಯನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿರುವ ಬಗ್ಗೆ ರಾಜ್ಯದ ಪ್ರಧಾನ ಕಾರ್ಯದರ್ಶಿ ಅವರ ಗಮನಕ್ಕೆ ತರಲಾಗಿದೆ, ಯೋಜನೆಯ ಸೂತ್ರಧಾರಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಅವರ ಚಿಂತನೆಯಲ್ಲಿ ಯೋಜನೆ ಮೂಡಿಬಂದಿದ್ದು ಗ್ರಾಮೀಣ ಜನರ ಆರೋಗ್ಯದ ದೃಷ್ಠಿಯಿಂದ ವೈದ್ಯಕೀಯ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ, ಅವರ ಮನೆ ಬಾಗಿಲಲ್ಲೇ ಸಿಗಬೇಕೆನ್ನುವ ನಿಟ್ಟಿನಲ್ಲಿ ಹೃದಯ ವೈಶಾಲ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರತೀ ಬುಧವಾರ ತಜ್ಞ ವೈದ್ಯರು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಸಾರ್ವಜನಿಕರನ್ನು ಉಚಿತವಾಗಿ ತಪಾಸಣೆ ಮಾಡಲಿದ್ದಾರೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.



ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಮಾತನಾಡಿ, ಹೃದಯ ವೈಶಾಲ್ಯ ಯೋಜನೆ ಜಿಲ್ಲೆಗೆ ಮಾತ್ರ ಸೀಮಿತವಾಗದೇ, ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎನ್ನುವ ಆಶಯವಿದೆ. ಯೋಜನೆಯನ್ನು ಯಶಸ್ವಿಗೊಳಿಸುವ ಜಾವಬ್ದಾರಿ ಊರಿನ ಜನರು ಹಾಗೂ ಆರೋಗ್ಯಾಧಿಕಾರಿಗಳ ಮೇಲಿದೆ. ಈ ಯೋಜನೆಯನ್ನು ಮುಂದೆಯೂ ಎಲ್ಲಾ ಕಡೆಗಳಲ್ಲಿ ಅನುಷ್ಠಾನ ತರಲಾಗುವುದು ಎಂದರು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯೆ ಶ್ವೇತಾ ಪ್ರವೀಣ್ ಜೈನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಡಾ| ಜಗದೀಶ್, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಸುಜಯ್, ವಕೀಲ ಬಾಹುಬಲಿ ಪ್ರಸಾದ್, ಮತ್ತಿತರ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ, ಫಲಾನುಭವಿಗಳು ಈ ಸಂದರ್ಭದಲ್ಲಿದ್ದರು.
Mangalore Free Heart Check at door service in Dakshina Kannada under Cardiologist Dr Padmanabha Kamath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am