ಬ್ರೇಕಿಂಗ್ ನ್ಯೂಸ್
07-06-23 09:13 pm Mangalore Correspondent ಕರಾವಳಿ
ಮಂಗಳೂರು, ಜೂ.7: ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆ ನಡೆಸುವುದಕ್ಕಾಗಿ ಹೃದಯ ತಜ್ಞರೇ ಹಳ್ಳಿ ಹಳ್ಳಿಗೆ ತೆರಳಿ, ಜನರನ್ನು ಉಚಿತವಾಗಿ ಪರೀಕ್ಷೆ ನಡೆಸುವ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ.
ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ "ಹೃದಯ ತಜ್ಞ ಮನೆ ಬಾಗಿಲಿಗೆ" ಯೋಜನೆಗೆ ಚಾಲನೆ ನೀಡಲಾಯಿತು.



ಈ ವೇಳೆ ಮಾತನಾಡಿದ ಜಿಪಂ ಸಿಇಓ ಡಾ.ಕುಮಾರ್, ಯೋಜನೆಯನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿರುವ ಬಗ್ಗೆ ರಾಜ್ಯದ ಪ್ರಧಾನ ಕಾರ್ಯದರ್ಶಿ ಅವರ ಗಮನಕ್ಕೆ ತರಲಾಗಿದೆ, ಯೋಜನೆಯ ಸೂತ್ರಧಾರಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಅವರ ಚಿಂತನೆಯಲ್ಲಿ ಯೋಜನೆ ಮೂಡಿಬಂದಿದ್ದು ಗ್ರಾಮೀಣ ಜನರ ಆರೋಗ್ಯದ ದೃಷ್ಠಿಯಿಂದ ವೈದ್ಯಕೀಯ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ, ಅವರ ಮನೆ ಬಾಗಿಲಲ್ಲೇ ಸಿಗಬೇಕೆನ್ನುವ ನಿಟ್ಟಿನಲ್ಲಿ ಹೃದಯ ವೈಶಾಲ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರತೀ ಬುಧವಾರ ತಜ್ಞ ವೈದ್ಯರು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಸಾರ್ವಜನಿಕರನ್ನು ಉಚಿತವಾಗಿ ತಪಾಸಣೆ ಮಾಡಲಿದ್ದಾರೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.



ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಮಾತನಾಡಿ, ಹೃದಯ ವೈಶಾಲ್ಯ ಯೋಜನೆ ಜಿಲ್ಲೆಗೆ ಮಾತ್ರ ಸೀಮಿತವಾಗದೇ, ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎನ್ನುವ ಆಶಯವಿದೆ. ಯೋಜನೆಯನ್ನು ಯಶಸ್ವಿಗೊಳಿಸುವ ಜಾವಬ್ದಾರಿ ಊರಿನ ಜನರು ಹಾಗೂ ಆರೋಗ್ಯಾಧಿಕಾರಿಗಳ ಮೇಲಿದೆ. ಈ ಯೋಜನೆಯನ್ನು ಮುಂದೆಯೂ ಎಲ್ಲಾ ಕಡೆಗಳಲ್ಲಿ ಅನುಷ್ಠಾನ ತರಲಾಗುವುದು ಎಂದರು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯೆ ಶ್ವೇತಾ ಪ್ರವೀಣ್ ಜೈನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಡಾ| ಜಗದೀಶ್, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಸುಜಯ್, ವಕೀಲ ಬಾಹುಬಲಿ ಪ್ರಸಾದ್, ಮತ್ತಿತರ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ, ಫಲಾನುಭವಿಗಳು ಈ ಸಂದರ್ಭದಲ್ಲಿದ್ದರು.
Mangalore Free Heart Check at door service in Dakshina Kannada under Cardiologist Dr Padmanabha Kamath.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm