ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am