ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
19-04-24 04:27 pm
Bangalore Correspondent
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 05:18 pm
Mangalore Correspondent
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
19-04-24 03:43 pm
HK News Desk
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm