ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm