ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm