ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am