ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm